ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ನಾನು ಬದುಕಲು ಇಚ್ಛಿಸುವುದಿಲ್ಲ : ಆರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ 

ಬೆಂಗಳೂರು: ಸ್ವಚ್ಛ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಚಿವರು ನಿನ್ನೆ ರಾತ್ರಿ ಬೆಂಗಳೂರಿನ, ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದು ಹೇಳಿದರು.

ಬೆಳಗಾವಿ: ವಸತಿ ನಿವಾಸದಲ್ಲಿ ಅನಧಿಕೃತ ಮಸೀದಿ ನಿಮಾಣ -ಫಾತೀಮಾ ಮಸೀದಿಗೆ ಬೀಗ ಹಾಕಿದ ಮಹಾನಗರ ಪಾಲಿಕೆ – Vishwanews24

” ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ” ಎಂದು ಭಾವುಕರಾಗಿ ಹೇಳಿದರು.

ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವವಿದ್ಯಾಲಯದ ಶಂಕು ಸ್ಥಾಪನ ಕಾರ್ಯಕ್ರಮವೂ ನಡೆಯಲಿದೆ ಎಂದ ಸಚಿವರು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ, ಎಂದರು.

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ಆಸ್ಪತ್ರೆಯಲ್ಲಿ ಕಳ್ಳತನ : ರೋಗಿಗಳ ಚಿನ್ನಾಭರಣ ಕದ್ದು ಪರಾರಿ- Vishwanews24

ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಸಚಿವರು ಹೇಳಿದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply