ಅಪ್ಪ, ಮಕ್ಕಳದ್ದು ಇದೇ ಆಗೋಯ್ತು! ಸಿಎಂ ಕಣ್ಣೀರಿಗೆ ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಷಕಂಠನಂತೆ ನೋವು ನುಂಗುತ್ತಿದ್ದೇನೆ ಎಂಬ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಜೆಡಿಎಸ್ ವರಷ್ಠಿ ದೇವೇಗೌಡ ಹಾಗೂ ಅವರ ಮಗ ಸಿಎಂ ಕುಮಾರಸ್ವಾಮಿ ಜನರ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳಲು ಕಣ್ಣೀರು ಸುರಿಸುತ್ತಿದ್ದಾರೆ, ಈ ಅಪ್ಪ, ಮಕ್ಕಳದ್ದು ಇದೇ ಆಗೋಯ್ತು ಎಂದು ತಮ್ಮ ಆಪ್ತರ ಬಳಿ ಲೇವಡಿ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಕುಮಾರಸ್ವಾಮಿ ಈ ಹೇಳಿಕೆಯಿಂದ ಸಿಎಂಗೆ ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂಬ ಭಾವನೆ ಮೂಡಿಸುವಂತಿದೆ. ಇದು ಪಕ್ಷಕ್ಕೆ ಹಾನಿ ಉಂಟುಮಾಡಲಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾನಿ ಮಾಡುವುದು ಕುಮಾರಸ್ವಾಮಿ, ದೇವೇಗೌಡರ ಉದ್ದೇಶನಾ ಎಂಬ ಕುರಿತು ಸಿಎಂ ಸ್ಪಷ್ಟನೆ ನೀಡಬೇಕು. ಈ ರೀತಿ ಪದೇ ಪದೇ ಹೇಳಿಕೆ ನೀಡುವುದರಿಂದ ಈ ಎಲ್ಲ ಅಂಶಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬಿರುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೂ ಈ ಎಲ್ಲಾ ವಿಚಾರಗಳನ್ನು ಚರ್ಚಿಸಿದ್ದು, ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸೋಣ ಎಂದು ವೇಣುಗೋಪಾಲ್ ಸಿದ್ದರಾಮಯ್ಯಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
