ಅಯೋಧ್ಯೆಯ ರಾಮನ ಮೂರ್ತಿ ನಿರ್ಮಾಣಕ್ಕೆ ಕಾರ್ಕಳದ ಕಲ್ಲು ರವಾನೆ – Vishwanews24
ಅಯೋಧ್ಯೆಯ ರಾಮನ ಮೂರ್ತಿ ನಿರ್ಮಾಣಕ್ಕೆ ಕಾರ್ಕಳದಿಂದ ಕಲ್ಲು ಆಯ್ಕೆ..
ಕಾರ್ಕಳದ ಈದು ಗ್ರಾಮದಿಂದ ಬೃಹತ್ ಗಾತ್ರದ ಕಲ್ಲು ಕಳಿಸಿದ ಗ್ರಾಮಸ್ಥರು..
ಸಂತಸ ವ್ಯಕ್ತಪಡಿಸಿದ ಬಿಜೆಪಿ ನಾಯಕರು..
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರದ ಬಳಿ ಸ್ಥಾಪಿಸಲು ಉದ್ದೇಶಿಸಲಾಗಿರುವ ರಾಮನ ಪ್ರತಿಮೆ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯ ಕಾರ್ಕಳದಿಂದಲೂ ಕಲ್ಲು ಆಯ್ಕೆಯಾಗಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕರಿಯ ಕಲ್ಲಿನ ಊರು ಎಂದು ಹೆಸರಾದ ಕಾರ್ಕಳದ ಈದು ಪ್ರದೇಶದಿಂದ ಬೃಹತ್ ಗಾತ್ರದ ಕಲ್ಲು ತುಂಡು ರವಾನಿಸಲಾಗಿದೆ. ಗುರುವಾರ ರಾತ್ರಿ ವಿಶೇಷ ಪೂಜೆ ನಡೆಸುವ ಮೂಲಕ, ದೊಡ್ಡ ಲಾರಿಯಲ್ಲಿ ಭಾರಿ ತೂಕದ ಕಲ್ಲನ್ನು ತೆಗೆದುಕೊಂಡು ಹೋಗಲಾಗಿದೆ. ಕಾರ್ಕಳದ ಈದು ಗ್ರಾಮದ ತುಂಗ ಪುಜಾರಿಯವರ ಭೂಮಿಯಲ್ಲಿದ್ದ ಕಲ್ಲನ್ನು ಆಯ್ಕೆ ಮಾಡಲಾಗಿತ್ತು. ಈ ಬೆನ್ನಲ್ಲೆ ರಾಜ್ಯ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ, ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದಿದ್ದಾರೆ.
ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ
ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ.
(1/3) pic.twitter.com/LEbFhR1dul— Pralhad Joshi (@JoshiPralhad) March 17, 2023
ಕಾರ್ಕಳ ಶಿಲ್ಪಿಗಳ ತವರೂರು
ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ. ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು. ಜೈ ಶ್ರೀರಾಮ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿ ಸಂಸತಪಟ್ಟಿದ್ದಾರೆ.
ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್
ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿ, ” ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಭವ್ಯವಾದ ಶ್ರೀ ರಾಮ ಮೂರ್ತಿ ಕೆತ್ತನೆಗೆ ಆಯ್ಕೆಯಾದ ನಮ್ಮ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ. ಜೈ ಶ್ರೀರಾಮ್” ಎಂದಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಐತಿಹಾಸಿಕ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಭವ್ಯವಾದ ಶ್ರೀ ರಾಮ ಮೂರ್ತಿ ಕೆತ್ತನೆಗೆ ಆಯ್ಕೆಯಾದ ನಮ್ಮ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ.
ಜೈ ಶ್ರೀರಾಮ್ #Ayodhya #shriRam pic.twitter.com/eEbizKdNmW— Sunil Kumar Karkala (@karkalasunil) March 17, 2023
