ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ – Vishwanews24
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
ಈ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ/ ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಹತ್ಯೆಯಾದ ದೀಪಕ್ ರಾವ್, ಫಾಜೀಲ್, ಜಲೀಲ್, ಮಸೂದ್ ಕುಟುಂಬಕ್ಕೆ ಪರಿಹಾರ : ಗೃಹ ಸಚಿವ ಭರವಸೆ – Vishwanews24
