ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ – viswanews24

Featured, ರಾಜ್ಯ ನ್ಯೂಸ್

ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ

ಬೆಳಗಾವಿ :ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆರೋಪ ಮಾಡಿದ್ದರು.

ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಕಾರ್ಕಳ: ಡಿ.27 ರಿಂದ ಡಿ.29 ರವರೆಗೆ ಕಾರ್ಲೋತ್ಸವ- 2024 – vishwanews24

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಿ, ನೋಡೋಣ. ಬನ್ನಿ ಧರ್ಮಸ್ಥಳಕ್ಕೆ ಪ್ರಮಾಣ ಮಾಡಿ ಹೇಳಿ. ಧರ್ಮಸ್ಥಳಕ್ಕೆ ಬನ್ನಿ, ನಾನೂ ಕೂಡ ಬರುತ್ತೇನೆ ಎಂದು ಸಿಟಿ ರವಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.

Leave a Reply