ಅಸನಿ ಚಂಡಮಾರುತ – ಕರಾವಳಿಯಲ್ಲಿ ಮಳೆ ಆರ್ಭಟ : ಸಮುದ್ರ ತೀರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ – Vishwanews24

Featured, ದಕ್ಷಿಣ ಕನ್ನಡ

ಅಸನಿ ಚಂಡಮಾರುತ – ಕರಾವಳಿಯಲ್ಲಿ ಮಳೆ ಆರ್ಭಟ :ಸಮುದ್ರ ತೀರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ. ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಕಿರಿಕ್ ಕೊಟ್ಟಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗ್ತಿದೆ. ಗಾಳಿಯೂ ವೇಗವಾಗಿ ಬೀಸುತ್ತಿದೆ. ಸಾಲು ಸಾಲು ರಜೆಗಳ ನಡುವೆ ಮಂಗಳೂರಿಗೆ ಹೊರಟಿದ್ದ ಪ್ರವಾಸಿಗರಿಗೆ ನಿರಾಶೆಯಾಗಿದೆ. ಬೀಚ್ ಮತ್ತು ದೇವಸ್ಥಾನದ ಟೂರ್ ಪ್ಲಾನ್ ಮಾಡಿ ಬಂದವರು ದೇವರ ದರ್ಶನ ಮಾಡಿ ವಾಪಸ್ಸಾಗುತ್ತಿದ್ದಾರೆ.

ಜೋರು ಅಲೆಗಳಿರುವ ಕಾರಣ ವಾಟರ್ ಸ್ಟೋರ್ಸ್, ಸೈಂಟ್ ಮೇರಿಸ್ ಐಲ್ಯಾಂಡ್ ಹೋಗುವುದು ನಿಷೇಧ ಮಾಡಲಾಗಿದೆ. ಸಮುದ್ರದ ದೂರಕ್ಕೆ ಹೋಗಿ ಸ್ನಾನ ಮಾಡುವುದಕ್ಕೂ ನಿಷೇಧ ಮಾಡಲಾಗಿದೆ. ನಿಷೇಧ ಮಾಹಿತಿ ಇಲ್ಲದೇ ದೂರದ ಊರುಗಳಿಂದ ಪ್ರವಾಸಕ್ಕೆ ಅಂತ ರಜೆ ಹಾಕಿ ಮಲ್ಪೆ ಸಮುದ್ರ ತೀರಕ್ಕೆ ಬಂದವರು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಹೋಟೆಲ್ ಬುಕ್ಕಿಂಗ್ ಕೂಡ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೆಚ್ಚು ದಿನ ಇದ್ದು ಎಂಜಾಯ್ ಮಾಡಬೇಕು ಅಂದುಕೊಂಡ ಪ್ರವಾಸಿಗರು, ತಮ್ಮ ಪ್ಲಾನ್ ಡ್ರಾಪ್ ಮಾಡಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾರೆ.

Leave a Reply