ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 12.20 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗವಹಿಸುವರು.

ಅಂದು ನಗರದಲ್ಲಿ ವಾಸ್ತವ್ಯ ಹೂಡಿ, ಆ.31 ರಂದು ಬೆಳಿಗ್ಗೆ 7 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.