ಆ.9ರಂದು ಉಡುಪಿ ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ – vishwanews24

Featured, ಉಡುಪಿ

ಆ.9ರಂದು ಉಡುಪಿ ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ ಸೌಂದರ್ಯವನ್ನು ಭವ್ಯಗೊಳಿಸಲಾಗಿದೆ.

ನೂತನ ಯಾಳಿಯನ್ನು ಹೊಸ್ತಿಲ ಹುಣ್ಣಿಮೆಯ ಪರ್ವದಿನದಂದು ಆ.9ರಂದು ಬೆಳಿಗ್ಗೆ ಮಹಾಪೂಜೆಯ ಬಳಿಕ 10 ಗಂಟೆಗೆ ರಾಜ್ಯಸಭಾ ಸದಸ್ಯೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಳಿಕ ರಾಜಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವರು.

ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕರಾದ ಶ್ರೀಮತಿ ಸುಧಾ ಮೂರ್ತಿ ಮತ್ತು ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶ್ ಕುಮಾರ್ ರವರು ಅಭ್ಯಾಗತರಾಗಿ ಆಗಮಿಸುವರು.

ಭಾರೀ ಮಳೆ ಮುನ್ಸೂಚನೆ : 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – vishwanews24

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

ಮಹಿಳಾ ವಿದ್ಯಾಪೀಠದ ಶುಭಾರಂಭ:
ಮಹಿಳೆಯರಲ್ಲೂ ಧಾರ್ಮಿಕ, ಸಾಂಸ್ಕೃತಿಕ ಪ್ರಜ್ಞೆ ಉದ್ದೀಪನಗೊಳಿಸಿ ಅವರನ್ನೂ ತೊಡಗಿಸಿಕೊಳ್ಳುವ ಆಶಯದಿಂದ ಪುತ್ತಿಗೆ ಮಠದಿಂದ ಆರಂಭಿಸಲಾಗುವ ಮಹಿಳಾ ವಿದ್ಯಾಪೀಠಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುಧಾ ಮೂರ್ತಿ ಇದೇ ಸಂದರ್ಭದಲ್ಲಿ ಗೀತಾ ಮಂದಿರದಲ್ಲಿ ಚಾಲನೆ ನೀಡುವರು.

ಬಿಡುವಿನ ವೇಳೆಯಲ್ಲಿ ‌ಮಹಿಳೆಯರಿಗೆ ಲಕ್ಷ್ಮೀಶೋಭಾನೆ, ಭಗವದ್ಗೀತೆ, ವಿವಿಧ ಶ್ಲೋಕಗಳನ್ನು ಮಾತ್ರವಲ್ಲದೇ ರಂಗೋಲಿ, ಹೂಕಟ್ಟುವುದು, ಬತ್ತಿ ಹೊಸೆಯುವುದು ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ಮಹಿಳಾ ವಿದ್ಯಾಪೀಠದಲ್ಲಿ ಅನುಭವಿ‌ ಮಹಿಳೆಯರು ತಿಳಿಸಿಕೊಡುವರು ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟನೆ ತಿಳಿಸಿದೆ.

ಪುತ್ತೂರು : ಯುವ ಪಶುವೈದ್ಯೆ ಆತ್ಮಹತ್ಯೆ – vishwanews24

Leave a Reply