ಮಂಗಳೂರು : ಇಂದು ಸಂಜೆಯೊಳಗೆ ಸಚಿವ ಈಶ್ವರಪ್ಪ ಉಚ್ಛಾಟಿಸಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ಡಿಕೆ ಶಿವಕುಮಾರ್ -Vishwanews24
ಇಂದು ಸಂಜೆಯೊಳಗೆ ಸಚಿವ ಈಶ್ವರಪ್ಪ ಉಚ್ಛಾಟಿಸಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ಡಿಕೆ ಶಿವಕುಮಾರ್ -Vishwanews24
ಮಂಗಳೂರು : ಸಚಿವ ಈಶ್ವರಪ್ಪ ಅವರು ಸಿಎಂ ವಿರುದ್ಧವೇ ರಾಜ್ಯಪಾಲರು, ರಾಜ್ಯ ಬಿಜೆಪಿ ಉಸ್ತುವಾರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇಂತಹ ಸಚಿವರನ್ನು ಇಂದು ಸಂಜೆಯೊಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಿ, ಇಲ್ಲವೇ ನೀವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವುದೇ ಒಬ್ಬರೇ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದ್ರೇ ಇದೀಗ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.
