ಇದೇ ನನ್ನ ಕೊನೆಯ ಚುನಾವಣೆ : ಸಿದ್ದರಾಮಯ್ಯ – Vishwanews24
ಇದೇ ನನ್ನ ಕೊನೆಯ ಚುನಾವಣೆ : ಸಿದ್ದರಾಮಯ್ಯ
ಮೈಸೂರು : 2023 ರ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ಹೀಗಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ನನ್ನ ಕೊನೆಯ ಚುನಾವಣೆ, ನನ್ನ ಹುಟ್ಟೂರು ಸಿದ್ದರಾಮನಹುಂಡಿ ವರುಣಾ ಕ್ಷೇತ್ರಕ್ಕೆ ಬರುತ್ತದೆ.
ಹೀಗಾಗಿ ನಾನು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ನನ್ನ ಎದುರಾಳಿ ಬಗ್ಗೆ ಯೋಚನೆ ಮಾಡಲ್ಲ. ಜನರ ಆಶೀರ್ವಾದದಿಂದ ನಮ್ಮ ಗೆಲುವು ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
ಉಡುಪಿ: ರೈಲ್ವೇ ಸ್ಟೇಶನ್ ಬಳಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ – Vishwanews24
ಇಂದು ಕರ್ನಾಟಕ ವಿಧಾನಸಭೆ ಚುಣಾವಣೆ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ವೇಳೆ ನಡೆಯುವ ಅಕ್ರಮಗಳನ್ನು ಆಯೋಗ ತಡೆಯಬೇಕು. ಪಾರದರ್ಶಕವಾಗಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕು. ಆಡಳಿತ ಪಕ್ಷ ಸೇರಿ ಯಾರೇ ಅಕ್ರಮ ನಡೆಸಿದ್ರೂ ಕ್ರಮ ಕೈಗೊಳ್ಳಬೇಕು ಎಂದರು.
