ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಅನರ್ಹ ಶಾಸಕ ಎಚ್. ವಿಶ್ವನಾಥ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮೂಲಕ ಗೆದ್ದು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು, ಕೊನೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರೊಂದಿಗೆ ಸೇರಿ ಅನರ್ಹತೆಯ ಶಿಕ್ಷೆ ಅನುಭವಿಸುತ್ತಿರುವ ಹೆಚ್ ವಿಶ್ವನಾಥ್ ಇದೀಗ ಹೆಚ್ ವಿಶ್ವನಾಥ್ ಘೋಷಿಸಿದ್ದಾರೆ.

ರಾಜ್ಯದ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಕಂಗೆಟ್ಟಿರುವ ಎಚ್. ವಿಶ್ವನಾಥ್ ಇನ್ನು ಮುಂದೆ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ರಾಜಕೀಯ ಚಟುವಟಿಕೆಗಳಿಗೆ ಮರಳುವುದಿಲ್ಲ ಎಂದು ಹೇಳಿದರು.

ಇತ್ತೀಚೆಗೆ ಜೆಡಿಎಸ್‌ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಎಚ್‌.ವಿಶ್ವನಾಥ್‌ ಸ್ವಾಗತಿಸಿದ್ದರು. ರಾಷ್ಟ್ರೀಯ ಅಧ್ಯಕ್ಷರಿಗೆ ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ಅಧಿಕಾರವಿದೆ. ಅದರಂತೆ ದೇವೇಗೌಡರು ತಮ್ಮನ್ನು ಉಚ್ಚಾಟಿಸಿದ್ದಾರೆ. ಈ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ ಎಂದು ಪರೋಕ್ಷವಾಗಿ ತಿವಿದಿದ್ದರು.

ಮೈತ್ರಿ ಸರ್ಕಾರದ ಆಡಳಿತ ಬಿರುಕುಗೊಳ್ಳಲು ಮತ್ತು ಸರ್ಕಾರ ಪತನವಾಗಲು ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಕಾರಣ, ನಾವಲ್ಲ ಎಂದರು. ಕಾಂಗ್ರೆಸ್‌ನಲ್ಲಿ ಸಂಸದನಾಗಿದ್ದಾಗ ಸುಳ್ಳು ಆರೋಪ ಹೊರಿಸಿ ಉಚ್ಚಾಟನೆ ಮಾಡವಂತೆ ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದರು. ಈ ವಿಷಯವನ್ನು ಕೆ.ಸಿ. ವೇಣುಗೋಪಾಲ್ ಅವರೇ ತಿಳಿಸಿದ್ದರು. ಸಿದ್ದರಾಮಯ್ಯ ನನಗೆ ಒಂದಲ್ಲ ಒಂದು ರೀತಿಯ ಅವಮಾನ ಮಾಡುತ್ತಿದ್ದರು.