ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24

Featured, ಉಡುಪಿ

ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24

ಕುಂದಾಪುರ : ರಾಜ್ಯ ಬಿಜೆಪಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೊಂಡು ಒಂದು ವಾರವೇ ಕಳೆಯುತ್ತಿದೆ. ಆದ್ರೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿರಲಿಲ್ಲ. ಇದೀಗ ಕೊನೆಗೂ ನೂತನ ಸಚಿವರಿಗೆ ಇನ್ನೆರಡು ದಿನಗಳಲ್ಲಿಯೇ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸುವ ಮೂಲಕ, ಮುಹೂರ್ತ ಫಿಕ್ಸ್ ಆಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ನೂತನ ಸಚಿವರಿಗೆ ಯಾವಾಗ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಕೇಳಿದಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಆದಂತೆ ಆಗಿದೆ.

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24