ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ : ಕೋಡಿಮಠ ಶ್ರೀ – Vishwanews24
ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ : ಕೋಡಿಮಠ ಶ್ರೀ – Vishwanews24
ಹಾಸನ : ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ ಅಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭೀಕರ ಭವಿಷ್ಯವನ್ನು ನುಡಿದಿದ್ದಾರೆ. ಅವರು ಇಂದು ಹಾಸನದಲ್ಲಿರುವ ತಮ್ಮ ಮಠದಲ್ಲಿ ಈ ಬಗ್ಗೆ ಅವರು ಹೇಳಿದರು.
ಇದೇ ವೇಳೆ ಅವರು ಬಯಲು ಹೋಗಿ ಮಲೆನಾಡಾಗುತ್ತದೆ, ಮಲೆನಾಡು ಹೋಗಿ ಬಯಲಾಗುತ್ತದೆ ಅಂತ ಹೇಳಿದರು. ಇದೇ ವೇಳೆ ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಭಾರತದಲ್ಲಿ ಈ ಬಾರಿ ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.

ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಕಾಲ ಕಾಲಕ್ಕೆ ಭವಿಷ್ಯಗಳನ್ನು ನುಡಿಯುತ್ತಾರೆ, ಇವೆ ಭವಿಷ್ಯಗಳು ಕೆಲವು ನಿಜವಾಗಿದ್ದಾವೆ ಅಂತ ಭಕ್ತರು ನಂಬಿದ್ದಾರೆ.
