ಉಡುಪಿಗೆ ರೆಡ್ ಅಲರ್ಟ್ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳರ್ ಸೂಚನೆ  – vishwanews24

Featured, ಉಡುಪಿ

ಉಡುಪಿಗೆ ರೆಡ್ ಅಲರ್ಟ್ : ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳರ್ ಸೂಚನೆ 

ಉಡುಪಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಬಿರುಸಾಗಿ ಸಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. 16ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅವಧಿಗೂ ಮುನ್ನವೇ ಅಧಿಕ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಗೆ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರವಾಸ ತಾಣಗಳಲ್ಲಿ, ನದಿ-ಸಮುದ್ರ ಭಾಗಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲು ಸೂಚಿಸಲಾಗಿದೆ. ಸಮುದ್ರ ಹಾಗೂ ನದಿ ತೀರದಲ್ಲಿ ವಾಸಿಸುವ ಜನರನ್ನು ಅಗತ್ಯ ಬಿದ್ದರೆ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಬೇಕು, ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರವನ್ನು ತೆಗೆಯಬೇಕು, ದಿನದ 24 ಗಂಟೆಯೂ ಕೂಡ ಸಹಾಯವಾಣಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಸೂಚನೆ ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರೂ ಕೂಡ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

Leave a Reply