ಉಡುಪಿ:ನಗರಸಭೆ ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ -Vishwanews24

Featured, ಉಡುಪಿ

ಉಡುಪಿ:ನಗರಸಭೆ ಪೌರ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ -Vishwanews24

ಉಡುಪಿ: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನೇಜಾರಿನ ಇಸ್ಮಾಯಿಲ್‌(55) ಹಾಗೂ ಹೂಡೆಯ ಸೊಹೇಲ್‌(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24

ಆರೋಪಿಗಳು ಸಿಟಿ ಬಸ್‌ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್‌ ಮತ್ತು ಸೊಹೇಲ್‌, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24