ಉಡುಪಿ:ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು – vishwanews24
ಉಡುಪಿ:ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.
ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.
