ಉಡುಪಿಯಲ್ಲಿ ಪೇಜಾವರ ಶ್ರೀ ಇಫ್ತಾರ್ ಕೂಟ ರದ್ದು!

Featured, ಉಡುಪಿ

ಉಡುಪಿ :ಕಳೆದ ವರ್ಷ ಉಡುಪಿಯ ಪ್ರಸಿದ್ಧ ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಪೇಜಾವರ ಶ್ರೀಗಳ ಈ ನಡೆಯು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಈ ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟವನ್ನೇರ್ಪಡಿಸಲು ಸಿದ್ಧತೆ ನಡೆಸಿದ್ದು, ಉಡುಪಿಯಲ್ಲಿರುವ ಗೋವಿಂದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲು ತಯಾರಿ ನಡೆಸಲಾಗಿತ್ತು. ಆದರೆ ಇದೀಗ ಇಫ್ತಾರ್ ಕೂಟವನ್ನು ರದ್ದು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಬಾರಿ ಇಫ್ತಾರ್ ಕೂಟ ನಡೆಸಿದ್ದ ಸಂದರ್ಭದಲ್ಲಿ ಶ್ರೀರಾಮಸೇನೆ ಸೇರಿದಂತೆ ಹಲವು ಸಂಘಟನೆಗಳು ಇದರ ವಿರುದ್ಧವಾಗಿ ಪ್ರತಿಭಟನೆ ನಡೆಸಿದ್ದರು. ಇದೀಗ ಸಂಘಟನೆಗಳು ಸೇರಿದಂತೆ ಹಲವರಿಂದ ಒತ್ತಡಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಇಫ್ತಾರ್ ಕೂಟವನ್ನು ರದ್ದುಗೊಳಿಸಲಾಗಿದೆ ಎಂದು ಪೇಜಾವರ ಸ್ವಾಮೀಜಿ ಬ್ಲಡ್ ಡೊನೇಟಿಂಗ್ ತಂಡದ ಅನ್ಸಾರ್ ಅಹ್ಮದ್ ಹಾಗೂ ಆರೀಫ್ ದೊಡ್ಡಣಗುಡ್ಡೆ ತಿಳಿಸಿದ್ದಾರೆ.