ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್ – vishwanews24

Featured, ಉಡುಪಿ

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್

ಉಡುಪಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಭಂದಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ,(ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.

ಕುವೈತ್ ಅಗ್ನಿ ದುರಂತ: ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ – vishwanews24

ಈ ನಿಟ್ಟಿನಲ್ಲಿ ಬಕ್ರಿದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟದ ಕೆಲವು ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ಗಮನಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದು ಜಿಲ್ಲೆಯ ಕೆಲವೊಂದು ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗೋ ಸಾಗಾಟ ಕಳ್ಳತನ ಮತ್ತು ಗೋ ಹತ್ಯೆ ನಡೆಯುವ ಸಾಧ್ಯತೆ ಇದೆ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ.

ಮಂಗಳೂರು :ನಾನು ಒಳ್ಳೆಯವರಿಗೆ ಕಾಣುತ್ತೇನೆ, ಸಮಾಜ ವಿರೋಧಿಗಳಿಗೆ ಕಾಣುವುದಿಲ್ಲ : ಯು.ಟಿ. ಖಾದರ್ – vishwanews24

Leave a Reply