ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು ಮತ್ತು ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆ – Vishwanews24

Featured, ಉಡುಪಿ

ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆ

ಉಡುಪಿ : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ. ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಮೂಲಕ ತಿಳಿಸಿದ್ದಾರೆ ಹಾಗೂ ಈ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ.

ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ : ಉಡುಪಿಯಲ್ಲಿ ಸಿಎಂ – Vishwanews24

ದಿವಾಕರ ಬಿ ಶೆಟ್ಟಿ ಕಳತ್ತೂರು ಇವರು ಕಳೆದ 30 ವರ್ಷಗಳಿಂದ ಕಾಪು ಕಳತ್ತೂರು ಪರಿಸರದಲ್ಲಿ 1000 ಕ್ಕೂ ಮಿಕ್ಕಿ ಸರಕಾರಿ ಸೌಲಭ್ಯ ಜನರಿಗೆ ತಲುಪುವ ಹಾಗೆ ವ್ಯವಸ್ಥೆ ಮಾಡಿದ್ದಾರೆ ಅದಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನ,ವಿದ್ಯಾಬ್ಯಾಸಕ್ಕೆ ಸಹಾಯ ಮಾಡಿದ್ದಾರೆ ವಿವಿಧ ಸಂಘಟನೆಯಿಂದ ಬಡ ಜನರಿಗೆ ಮನೆ ಕಟ್ಟುವಲ್ಲಿ ಸಹಾಯ ಮಾಡಿರುತ್ತಾರೆ ಬಡವರ ಕಷ್ಟ ದಲ್ಲಿ ಸದಾ ಬಾಗಿಯಾಗುತ್ತಾರೆ.

ಹವ್ಯಾಸಿ ಪತ್ರಕರ್ತರಾಗಿದ್ದು ಕಾಪು ದ್ವಾದಶಿ ಪಬ್ಲಿಸಿಟಿ ನ್ಯೂಸ್ ಸರ್ವಿಸ್ ಇದರ ಆಡಳಿತ ನಿರ್ದೇಶಕರಾಗಿದ್ದು ಗ್ರಾಮೀಣ ಮಟ್ಟದ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ನಿರ್ವಹಿಸುತ್ತಿದ್ದಾರೆ.

ಸಮಾಜ ಸೇವೆಗಾಗಿ ನವದೆಹಲಿಯಲ್ಲಿ ರಾಷ್ಟ್ರಿಯ ಪ್ರಶಸ್ತಿ ಗ್ಲೋರಿ ಆಫ್ ಇಂಡಿಯಾ ಹಾಗೂ ಕೇರಳದಲ್ಲಿ ಕೈರಾಲಿ ಪ್ರಕಾಶನ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದರು.

ಉಡುಪಿ : ನೀವು ಅಧಿಕಾರದಲ್ಲಿದ್ದಾಗ ನಿಮ್ಮ ಕರ್ತವ್ಯ ಪ್ರಜ್ಞೆ ಎಲ್ಲಿತ್ತು ? ನಿಮ್ಮಿಂದ ಪಾಠ ಕಲಿಯಬೇಕಾದ್ದು ಏನೂ ಇಲ್ಲ : ಕಾಂಗ್ರೆಸ್ ಗೆ ಸಿಎಂ – Vishwanews24

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರಿಯ ಪ್ರಶಸ್ತಿಗೆ ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆ

ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚಾತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಯನ್ನು ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಮೂಲಕ ತಿಳಿಸಿದ್ದಾರೆ ಹಾಗೂ ಈ ಸಮಾರಂಭದಲ್ಲಿ ಗೋವಾದ ಸಚಿವರು ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ

ಮೊಹಮ್ಮದ್ ಫಾರೂಕ್ ಉದ್ಯಮಿಯಾಗಿದ್ದು ಸ್ನೇಹ ಜೀವಿಯಾಗಿ ಕಾಪು ಪರಿಸರದ ಸಮಾಜ ಸೇವಕರಾಗಿ ಎಲ್ಲರ ಗಮನ ಸೆಳೆದು ನೂರಾರು ಕಡೆ ಗೌರವ ಸನ್ಮಾನ ಪಡೆದುಕೊಂಡಿರುತ್ತಾರೆ ಈಗಾಗಲೇ ಏಶ್ಯನ್ ಫೆಸೀಫಿಕ್ ಗೋಲ್ಡ್ ಸ್ಟಾರ್ ರಾಷ್ಟ್ರಿಯ ಪ್ರಶಸ್ತಿ,ಕರ್ನಾಟಕ ಸರಕಾರ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೇರಳ-ಕರ್ನಾಟಕ ರಾಜ್ಯದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ ಕಾಸರಗೋಡು ಕೈರಳಿ ಪ್ರಕಾಶನ ಇವರಿಂದ ಸಮಾಜ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ ವಿಚಾರದಿಂದಾಗ ಕರ್ನಾಟಕದ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಿದೆ : ಯು.ಟಿ ಖಾದರ್ ವಾಗ್ದಾಳಿ – VIshwanews24

Leave a Reply