ಉಡುಪಿ : ಇಂದಿನಿಂದ ಮೂರು ದಿನ ಮಡಗಾಂವ್ – ಮಂಗಳೂರು ಜಂಕ್ಷನ್ ನಡುವೆ ಮೆಮು ರೈಲು ಸಂಚಾರ – vishwanews24

Featured, ಉಡುಪಿ

ಇಂದಿನಿಂದ ಮೂರು ದಿನ ಮಡಗಾಂವ್ – ಮಂಗಳೂರು ಜಂಕ್ಷನ್ ನಡುವೆ ಮೆಮು ರೈಲು ಸಂಚಾರ

ಉಡುಪಿ, : ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.

ಈ ರೈಲು ಜು.20, 21, 22ರಂದು -ಶನಿವಾರ, ರವಿವಾರ, ಸೋಮವಾರ – ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಟಿರುವ ಮೆಮು ರೈಲು ಅಪರಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ – vishwanews24

ಮರು ಪ್ರಯಾಣದಲ್ಲಿ ಅಪರಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7:00 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಉಳಿದ ಎರಡು ದಿನಗಳಲ್ಲಿ ರೈಲು ಇದೇ ಸಮಯದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ

ಈ ರೈಲಿಗೆ ಕಣಕೋಣ, ಕಾರವಾರ, ಹರ್ವಾಡ, ಅಂಕೋಲ, ಗೋರ್ಕಣ ರೋಡ್, ಮಿರ್ಜಾನ, ಕುಮಟ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರಕೂರು, ಉಡುಪಿ, ಮುಲ್ಕಿ, ಸುರತ್ಕಲ್, ತೋಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಪು ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ – vishwanews24

Leave a Reply