ಉಡುಪಿ: ಕಳೆದ ಒಂದು ವರ್ಷದಿಂದ ನೀರಿನ ಮಧ್ಯೆ ಬಂಧಿಯಾಗಿದ್ದ 2 ಶ್ವಾನಗಳನ್ನು ರಕ್ಷಿಸಿದ ಅಪತ್ಭಾಂದವ ಈಶ್ವರ್ ಮಲ್ಪೆ – Vishwanews24

Featured, ಉಡುಪಿ

ಉಡುಪಿ: ಕಳೆದ ಒಂದು ವರ್ಷದಿಂದ ನೀರಿನ ಮಧ್ಯೆ ಬಂಧಿಯಾಗಿದ್ದ 2 ಶ್ವಾನಗಳನ್ನು ರಕ್ಷಿಸಿದ ಅಪತ್ಭಾಂದವ ಈಶ್ವರ್ ಮಲ್ಪೆ.

ಉಡುಪಿ :ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ ,ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ.

ನೀವು ನಂಬಲಿಕ್ಕಿಲ್ಲ ,ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ ಬಂಧಿಯಾಗಿದ್ದವು.

ಎಲ್ಲ ಕಡೆ ನೀರಿನಿಂದ ಆವೃತವಾಗಿರುವುದರಿಂದ ನಾಯಿಗಳು ಒಳಗೇ ಬಂಧಿಯಾಗಿದ್ದವು.

ಉಡುಪಿ: ನೀರಿನ ಮಧ್ಯೆ ವರ್ಷದಿಂದ ಬಂಧಿಯಾಗಿದ್ದ 2 ಶ್ವಾನಗಳನ್ನು ರಕ್ಷಿಸಿದ ಅಪತ್ಭಾಂದವ  ಈಶ್ವರ್ ಮಲ್ಪೆ.! - NAMMAKUDLA NEWS - ನಮ್ಮಕುಡ್ಲ ನ್ಯೂಸ್

ಧಕ್ಕೆಯಲ್ಲಿ ಯಾರಾದರೂ ಎಸೆದ ತಿಂಡಿಗಳನ್ನು ತಿಂದು ಇವು ಬದುಕಿದ್ದವು.ಈ ವಿಷಯ ಅರಿತ ಆಪದ್ಭಾಂಧವ ಈಶ್ವರ್ ಮಲ್ಪೆ ,ನಾಯಿಗಳನ್ನು ಹೊರತೆಗೆಯಲು ಮುಂದಾದರು.

ಇದಕ್ಕಾಗಿ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದರು.ಹಗ್ಗ ,ಟ್ಯೂಬ್ ಮೂಲಕ ಇಳಿದು ನಾಯಿಗಳನ್ನು ಹೊರತರಲು ಪ್ರಯತ್ನಿಸಿದರು.

ಆದರೆ ಸುಲಭದಲ್ಲಿ ಅವು ಹೊರಬರಲಿಲ್ಲ.ಸುತ್ತಲೂ ಈ ಕಾರ್ಯಾಚರಣೆ ನೋಡಲು ಧಕ್ಕೆಯಲ್ಲಿ ಸಾಕಷ್ಟು ಜನ ಸೇರಿದ್ದರು.

ಮಂಗಳೂರು : ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟ ವಿಚಾರ : ಅರುಣ್‌ ಕುಮಾರ್ ಪುತ್ತಿಲ – Vishwanews24

ತಾನು ಹಿಡಿದ ಕೆಲಸವನ್ನು ಪೂರ್ಣಗೊಳಿಸದೆ ಮೇಲೆ ಬರುವವರಲ್ಲ ,ಈಶ್ವರ್ ಮಲ್ಪೆ.ಜಾಣ್ಮೆಯಿಂದ ನಾಯಿಗಳ ಮನವೊಲಿಸಿ ,ಹಗ್ಗದ ಮೂಲಕ ಹೊರ ತೆಗೆದರು.

ಈ ನಾಯಿಗಳು ವರ್ಷದಿಂದ ಒಳಗೇ ಬಂಧಿಯಾಗಿದ್ದರಿಂದ ನಡೆಯಲೂ ಆಗುತ್ತಿರಲಿಲ್ಲ.ಕೊನೆಗೂ ನಾಯಿಗಳು ಹೊರಬಂದಾಗ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದರು.

ಮಂಗಳೂರು : ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟ ವಿಚಾರ : ಅರುಣ್‌ ಕುಮಾರ್ ಪುತ್ತಿಲ – Vishwanews24

Leave a Reply