ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ 1.90 ಲಕ್ಷ ರೂ. ವಂಚನೆ – Vishwanews24

Featured, ಉಡುಪಿ

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ 1.90 ಲಕ್ಷ ರೂ. ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33) ಎಂಬವರಿಗೆ ಮೇ 4ರಂದು ಅನಾಮಧೇಯ ವ್ಯಕ್ತಿ ಕರೆ ಮಾಡಿ ಬ್ಯಾಂಕ್‌ಗೆ ಸಂಬಂಧಪಟ್ಟಂತೆ ಕೆವೈಸಿ ಅಪ್‌ಡೇಟ್ ಮಾಡಬೇಕಾಗಿದ್ದು, ನಿಮ್ಮ ಮೊಬೈಲ್‌ಗೆ ಬಂದಿರುವ ಓಟಿಪಿ ನೀಡುವಂತೆ ತಿಳಿಸಿದನು. ಅದನ್ನು ನಂಬಿದ ಗಣೇಶ್, ಓಟಿಪಿ ನೀಡಿದ್ದು, ಆ ಕೂಡಲೇ ಅವರ ಖಾತೆಯಿಂದ 1.90 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

ಬಂಟ್ವಾಳ : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ಮೃತ್ಯು – Vishwanews24

Leave a Reply