ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್ : ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್ – Vishwanews24
ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್ : ಕಣ್ಣೀರಿಟ್ಟ ಶಾಸಕ ರಘುಪತಿ ಭಟ್
ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಉಡುಪಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಭಾವುಕರಾಗಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಘುಪತಿ ಭಟ್ ನಿವಾಸಕ್ಕೆ ಅಭಿಮಾನಿಗಳು ದೌಡಾಯಿಸಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಭಿಮಾನಿಗಳನ್ನು ಕಂಡು ಕಣ್ಣೀರಿಟ್ಟಿದ್ದಾರೆ. ನಾನು ಶಾಕ್ನಲ್ಲಿದ್ದೇನೆ. ನಾನು ಏನು ಹೇಳುವ ಸ್ಥಿತಿಯಲ್ಲಿಲ್ಲ ಎಂದು ಭಾವುಕರಾಗಿದ್ದಾರೆ ಎಂದು ತಿಳಿದು ಬಂದಿದೆ.
