ಉಡುಪಿ : ಖಾಸಗಿ ಬಸ್ ಡಿಕ್ಕಿ – ಸ್ಕೂಟಿ ಸವಾರೆ ಮಹಿಳೆ ಸ್ಥಳದಲ್ಲೇ ಸಾವು -Vishwanews24
ಉಡುಪಿ: ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರೆಯೊಬ್ಬರು ಸ್ಥಳದಲ್ಲೆ ಮೃತ ಪಟ್ಟ ಘಟನೆ ಕಿನ್ನಿಮೂಲ್ಕಿ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು ಗುರುತಿಸಲಾಗಿದೆ.
ಇವರು ರಾತ್ರಿ 8.45 ಸುಮಾರಿಗೆ ಕಿನ್ನಿಮೂಲ್ಕಿ ಪೆಟ್ರೊಲ್ ಪಂಪ್ನಿಂದ ತನ್ನ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಎಕೆಎಮ್ಎಸ್ ನ ಚಾಲಕ ಸ್ಕೂಟಿಯನ್ನು ಗಮನಿಸದೆ ಇದ್ದುದರಿಂದ ಸವಾರೆ ಬಸ್ಸಿನ ಎಡ ಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

