ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ‌ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24

Featured, ಉಡುಪಿ

ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ‌ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಚಲಿಸುತ್ತಿದ್ದ ರೈಲಿಗೆ ತಲೆಗೊಟ್ಟು 10 ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮದ ಕೊಳಚ್ಚೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಳ್ಮಣುವಿನ ಸದಾಶಿವ ಆಚಾರ್ಯ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಆದರ್ಶ (16) ಮೃತ ದುರ್ದೈವಿ.

ಸೂಡ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಯಾಗಿದ್ದ ಆದರ್ಶ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆತ ಮುಂಬೈಯಿಂದ ಕೂಚುವೇಲಿಗೆ ಹೋಗುತ್ತಿದ್ದ ರೈಲಿಗೆ ತಲೆಕೊಟ್ಟಿದ್ದು, ಇದರಿಂದ ತಲೆ ಕೈಕಾಲು ಛಿದ್ರಗೊಂಡಿತ್ತು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಆದರ್ಶ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಎನ್ನಲಾಗಿದೆ.

ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆದಾಯದಷ್ಟೇ ಖರ್ಚು ಇರುತ್ತದೆ… ನೋಡಿ ಇಂದಿನ ದಿನ ಭವಿಷ್ಯ -Vishwanews24

Leave a Reply