ಉಡುಪಿ: ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ – Vishwanews24

Featured, ಉಡುಪಿ

ಉಡುಪಿ: ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ , ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ : ಡಾ. ಆರತಿ ಕೃಷ್ಣ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.

ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು ,ನಗರಸಭಾ ಸದ‌ಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಹಾಗೆಯೇ ರಾಜ್ಯದಲ್ಲಿ ಜನತೆಗೆ ನೀಡಿದ ಜನಪರ ಯೋಜನೆಗಳಿಂದ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕು ಎಂದರು.

ಬಿಜೆಪಿ ಪ್ರಣಾಳಿಕೆ ಘೋಷಣೆಗಳ ಪುಸ್ತಕದಂತಿದೆ ಹಾಗೂ ಮೋದಿ ಫೋಟೋ ಆಲ್ಬಮ್ ನಂತಿದೆ : ಪ್ರಿಯಾಂಕ್ ಖರ್ಗೆ – Vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ‌.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.

ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ ; ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ : ಏಕವಚನದಲ್ಲೇ ವಾಗ್ದಾಳಿ ನಡೆಸಿದ ಡಿಕೆ ಶಿ – Vishwanews24

Leave a Reply