ಉಡುಪಿ : ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24
ಉಡುಪಿ : ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24
ಅನ್ಬ್ಲೆ0ಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ. ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ. ಒಂದೆಡೆ ಡಿಜಿಟಲ್ಗೆ ಉತ್ತೇಜನ ನೀಡುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಸರಕಾರದ ಗೊಂದಲಕ್ಕೆ ಸಾಕ್ಷಿ. ಸರಕಾರಿ ಸೌಮ್ಯ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ.ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು : ಅಶೋಕ್ ಕುಮಾರ್ ಕೊಡವೂರು
ಜಿಲ್ಲಾ ವಕ್ತಾರ : ಭಾಸ್ಕರ್ ರಾವ್ ಕಿದಿಯೂರು
ಇದನ್ನೂ ಓದಿ :
ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ : CM ಬೊಮ್ಮಾಯಿ – Vishwanews24
