ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ – Vishwanews24

Featured, ಉಡುಪಿ

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು ಫೆಬ್ರವರಿ 27 ರಂದು ಮಂಗಳವಾರ ಉಡುಪಿ ಸಂತೆಕಟ್ಟೆಯ ಗ್ರೀನ್ ಎಕ್ರೆಸ್ ಒಪನ್ ಗಾರ್ಡನ್ ನಲ್ಲಿ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಒಂದು ಸಾವಿರಕ್ಕೂ ಅಧಿಕ ಕೆಟರಿಂಗ್ ಉದ್ಯಮ ನಡೆಸುತ್ತಿರುವ ಮಾಲಕರನ್ನು ಈ ಸಂಸ್ಥೆಯ ಮೂಲಕ ಸಂಘಟಿತಗೊಳಿಸುವ ಉದ್ದೇಶದಿಂದ ಈ ಸಂಸ್ಥೆಯು ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಉದ್ಯಮವು ಎದುರಿಸಬೇಕಾದ ಸವಾಲುಗಳು ಮತ್ತು ಗ್ರಾಹಕರಿಗೆ ಅತ್ಯುತ್ತಮ ಒದಗಿಸಿ ಕೊಡುವ ಬಗ್ಗೆ ಕಾಲಕಾಲಕ್ಕೆ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ದೃಷ್ಟಿಯಿಂದ ಈ ಸಂಸ್ಥೆಯು ಹಿರಿಯರ ಮಾರ್ಗದರ್ಶನದಂತೆ ಸ್ಥಾಪನೆಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ ಶ್ರೀ ಕ್ಷೇತ್ರಕ್ಕೆ ಮಾಠ, ವಂದನಿಯ ಮಸೋಂಜರ್ ಫರ್ಡಿನಾಂಡ್ ಗೋಂಸ್ವಾಲೀಸ್ ಆಶೀರ್ವಚನ ನೀಡಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕ ರಾಜ್ಯ ಕೆಟರಿಂಗ್ ಫೆಡರೇಶನ್ ಅಧ್ಯಕ್ಷ ಜಿ ಕೆ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿ ಮಾಲಕರ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಭಾಗವಹಿಸಲಿದ್ದಾರೆ ಅವರು ತಿಳಿಸಿದರು.

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ – Vishwanews24

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಸಾಲಿಯನ್ ಕೋಶ ಅಧಿಕಾರಿ ದೀಕ್ಷಿತ್ ಶೆಟ್ಟಿ ಉಪಾಧ್ಯಕ್ಷ ಜೂಲಿಯಸ್ ಲೂಯಿಸ್ ಪ್ರಜ್ವಲ್ ಭಾಸ್ಕರ್ ಶಶಾಂಕ್ ಉಪಸ್ಥಿತರಿದ್ದರು.

Leave a Reply