ಉಡುಪಿ : ಜಿಲ್ಲೆಯನ್ನು ಕೊರೋನಾ ಮುಕ್ತಗೊಳಿಸಲು ಸಾರ್ವಜನಿಕರು ಯಾವುದೇ ಭಯಪಡದೆ ಲಸಿಕೆಯನ್ನು ಪಡೆದುಕೊಳ್ಳಬೇಕು : ಜನತೆಯಲ್ಲಿ ಜಿಲ್ಲಾಧಿಕಾರಿ ಮನವಿ -Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ ಸಲುವಾಗಿ ಸಾರ್ವಜನಿಕರು ಯಾವುದೇ ಭಯಪಡದೆ ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು : ಜನತೆಯಲ್ಲಿ ಜಿಲ್ಲಾಧಿಕಾರಿ ಮನವಿ -Vishwanews24

ಉಡುಪಿ(Vishwanews24): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ
ಸಲುವಾಗಿ ಸಾರ್ವಜನಿಕರು ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲೆಯ ಜನತೆಯಲ್ಲಿ ಮನವಿ
ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ
ಸಲುವಾಗಿ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಶುಕ್ರವಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುತ್ತಿದ್ದು, ಈ
ಲಸಿಕೆಯಿಂದ ಯಾವುದೇ ರೀತಿಯ ಅಪಾಯ ಉಂಟಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರು ಲಸಿಕೆ ಕುರಿತು ಯಾವುದೇ ಭಯಪಡದೆ
ಪಡೆದುಕೊಳ್ಳುಬೇಕು. ಈ ಮೂಲಕ ಕೊರೋನಾವನ್ನು ಜಿಲ್ಲೆಯಿಂದ ಹೊಡೆದೋಡಿಸಲು ಸಹಕಾರ ನೀಡಿದಂತಗುತ್ತದೆ ಎಂದರು.

ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಇದೇ ವೇಳೆ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುವವರಿಗೆ ಯಾವುದೇ ನಿರ್ಭಂಧವಿಲ್ಲ ಆದರೆ ಮಹಾರಾಷ್ಟ್ರ
ಮತ್ತು ಕೇರಳದಿಂದ ಬರುವವರಿಗೆ ಆಕ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಎಂಐಟಿ ಕ್ಯಾಂಪಸ್‌ನಲ್ಲಿ 1000 ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದ
ಹಿನ್ನೆಲೆಯಲ್ಲಿ ಕ್ಯಾಂಪಸ್ ನ್ನು ಸೀಲ್‌ ಡೌನ್ ಮಾಡಲಾಗಿದೆ. ಇದರೊಂದಿಗೆ ಮಾಂಡವಿ ಅಪಾಟ್ರ್ಮೆಂಟ್ ನ್ನು ಕೂಡಾ ಸೀಲ್‌ ಡೌನ್ ಮಾಡಲಾಗಿದ್ದು, ಹೆಚ್ಚು
ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಅಲ್ಲಿಯೇ ಸೀಲ್‌ ಡೌನ್ ಮಾಡಿ ಕಂಟೈನ್ ಮಾಡುವ ಕೆಲಸ ನಡೆಯುತ್ತಿದೆ.

ಮಂಗಳೂರು : ಇಂದು ಸಂಜೆಯೊಳಗೆ ಸಚಿವ ಈಶ್ವರಪ್ಪ ಉಚ್ಛಾಟಿಸಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ಡಿಕೆ ಶಿವಕುಮಾರ್ -Vishwanews24