ಉಡುಪಿ : ಜಿಲ್ಲೆಯಲ್ಲಿ BPL ಕಾರ್ಡ್ ನೈಜ ಫಲಾನುಭವಿಗಳಿಗಾಗಿ ಸರ್ವೆ : ಜಿಲ್ಲಾಧಿಕಾರಿ ವಿದ್ಯಾಕುಮಾರಿ – vishwanews24
ಉಡುಪಿ : ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದಿರುವುದು ಕಂಡುಬಂದರೆ … :ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡುಗಳಿದ್ದು, ಒಟ್ಟು 1.92 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಅವುಗಳ ನೈಜತೆ ಕುರಿತಂತೆ ಈಗ ಸರ್ವೆ ನಡೆಸಲಾಗುತ್ತಿದೆ. ಅದನ್ನು ಶೇ.40ಕ್ಕೆ ಇಳಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ಪ್ರತಿಯೊಬ್ಬ ಕಾರ್ಡುದಾರರ ಆದಾಯ ಹಾಗೂ ಇತರ ವಿಷಯಗಳ ತನಿಖೆ ನಡೆಸಲಾಗುತ್ತಿದೆ. ಅದೇ ರೀತಿ ಬಿಪಿಎಲ್ ಕಾರ್ಡ್ ಪಡೆದಿರುವ ಸರಕಾರಿ ನೌಕರರಿಂದ ಕಾರ್ಡ್ ಹಿಂಪಡೆದು ದಂಡ ವಸೂಲಿ ಮಾಡಲಾಗುತ್ತದೆ ಎಂದರು.
ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ – vishwanews24
ಈ ವೇಳೆ ಬಡ, ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಲಾಗುವುದು. ಕಾನೂನಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದವರು ಸುವೋಮೋಟೊ ಆಗಿ ಕಾರ್ಡ್ನ್ನು ಹಿಂದಿರುಗಿಸಿ ಎಂದು ಮನಿ ಮಾಡಿದ ಅವರು, ಬೇಕಿದ್ದರೆ ತಮ್ಮ ಅಗತ್ಯತೆಗಾಗಿ ಎಪಿಎಲ್ ಕಾರ್ಡು ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ನ ದುರುಪಯೋಗ ವಾಗದಂತೆ ನೋಡಿಕೊಳ್ಳಲಾಗುವುದು. ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದಿರುವುದು ಕಂಡುಬಂದರೆ ಕ್ರಮ ಜರಗಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ ಕೆಲವರಿಗೆ ಹಣ ಬಾರದಿರುವ ಕುರಿತು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದಾಗ, ಜಿಲ್ಲೆಯ 452 ಮಂದಿಯಿಂದ ಇನ್ಕಮ್ ಟ್ಯಾಕ್ಸ್ ರಿಟರ್ನ್ ಕುರಿತಂತೆ ಸ್ಪಷ್ಟನೆಯನ್ನು ಕೇಳಲಾಗಿದೆ. ಅವರಿಂದ ದೃಢೀಕರಣ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದರು.
ಮಂಗಳೂರು : ಜೀವಂತ ನಾಯಿಯನ್ನು ತ್ಯಾಜ್ಯ ವಾಹನದಲ್ಲಿ ಸಾಗಿಸಿದ್ದ ಚಾಲಕನಿಗೆ ಮನಪಾ ಎಚ್ಚರಿಕೆ – vishwanews24
