ಉಡುಪಿ: ಜುಲೈ 1 ರಿಂದ ಬಸ್ ಸಂಚಾರ ಪ್ರಾರಂಭ -Vishwanews24

Featured, ಉಡುಪಿ

ಉಡುಪಿ: ಜುಲೈ 1 ರಿಂದ ಬಸ್ ಸಂಚಾರ ಪ್ರಾರಂಭ -Vishwanews24

ಉಡುಪಿ: ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಇದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರ ಪುನರಾರಂಭಿಸಲು ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.