ಉಡುಪಿ: ನಕ್ಸಲ್ ನಿಗ್ರಹ ಪಡೆಯ ಸತೀಶ್ ಬಿ.ಎಸ್ ಅವರಿಗೆ ರಾಷ್ಟ್ರಪತಿ ಸೇವಾ ಪದಕ – Vishwanews24

Featured, ಉಡುಪಿ

ಉಡುಪಿ: ನಕ್ಸಲ್ ನಿಗ್ರಹ ಪಡೆಯ ಸತೀಶ್ ಬಿ.ಎಸ್ ಅವರಿಗೆ ರಾಷ್ಟ್ರಪತಿ ಸೇವಾ ಪದಕ

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸಮಗ್ರ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಹೆಬ್ರಿ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ನಿರೀಕ್ಷಕ ಸತೀಶ್ ಬಿ. ಎಸ್. ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಿದರು.

ಜನರಿಂದ ಜೀರೋ ಕರಪ್ಟ್ ಎಂದು ಕರೆಸಿಕೊಂಡಿರುವ ಪೊಲೀಸ್ ನಿರೀಕ್ಷಕ ಸತೀಶ್ ಬಿ.ಎಸ್. ಅವರು ನಕ್ಸಲ್ ಪೀಡಿತ ಪುದೇಶಗಳಲ್ಲಿ ಅನೇಕ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಾನುರಾಗಿಯಾಗಿದ್ದಾರೆ. ನಾಡ್ರಾಲು ಗ್ರಾಮದ ತೆಂಗಮಾರು ಎಂಬಲ್ಲಿ ಕಾಡಿನ ನಡುವೆ ಗುಡಿಸಲಲ್ಲಿ ವಾಸಿಸುತ್ತಿದ್ದ ನಾರಾಯಣ ಗೌಡರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ನಿವಾಸ ಮನೆಯನ್ನು ಹೆಬ್ರಿಯ ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ಜತೆ ಸೇರಿ ಖರ್ಚು ವೆಚ್ಚ ಭರಿಸಿ ನಿರ್ಮಿಸಿಕೊಟ್ಟಿದ್ದಾರೆ.

ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಪ್ರಭು ಬಿ.ಚವ್ಹಾಣ್ – Vishwanews24

ಇದಲ್ಲದೆ ಕೊಲೆ, ದರೋಡೆ, ಅತ್ಯಾಚಾರ, ನಕ್ಸಲ್ ಸಮಸ್ಯೆ, ಚುನಾವಣಾ ಬಂದೋಬಸ್, ಮಾದಕ ದ್ರವ್ಯ ನಿಗ್ರಹ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಚಾಣಾಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದಕ್ಕೆ ಈ ಪದಕ ಒಲಿದಿದೆ.

Leave a Reply