ಉಡುಪಿ : ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ಸಿದ್ದರಾಮಯ್ಯರಿಂದ ಕಲಿಯಬೇಕಾಗಿಲ್ಲ : ರಘುಪತಿ ಭಟ್ – Vishwanews24
ಉಡುಪಿ : ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ಸಿದ್ದರಾಮಯ್ಯರಿಂದ ಕಲಿಯಬೇಕಾಗಿಲ್ಲ : ರಘುಪತಿ ಭಟ್ – Vishwanews24
ಉಡುಪಿ: ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲೇಜಿನಲ್ಲಿ ವಸ್ತ್ರ ಸಂಹಿತೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಎಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದರು.
ಇದಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿರುವ ಉಡುಪಿ ಶಾಸಕ ರಘುಪತಿ ಭಟ್ ಅವರು ʼರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ. ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲʼ. ಎಂದು ಹೇಳೀದ್ದಾರೆ.
ಇದನ್ನೂ ಓದಿ :
