ಉಡುಪಿ: ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ : ಯಶ್ ಪಾಲ್ ಸುವರ್ಣ – vishwanews24

Featured, ಉಡುಪಿ

ಉಡುಪಿ: ನಮ್ಮ ಕ್ಲಿನಿಕ್ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗೆ ಆದ್ಯತೆ : ಯಶ್ ಪಾಲ್ ಸುವರ್ಣ

ಉಡುಪಿ: ಕೇಂದ್ರ ಸರ್ಕಾರ ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಉಡುಪಿ ಶಾಸಕ
ಯಶ್ ಪಾಲ್ ಸುವರ್ಣ ಹೇಳಿದರು.

ಕೊಡವೂರು ವಾರ್ಡಿನ ಲಕ್ಷ್ಮೀ ನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಅಶೋಕ್, ನಗರಸಭಾ ಸದಸ್ಯ ವಿಜಯ ಕೊಡವೂರು, ತಾಲೂಕು ಆರೋಗ್ಯಾಧಿಕಾರಿ ವಾಸುದೇವ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ಪೊಲೀಸ್ ಅಧಿಕಾರಿ ‌ಹಾಗೂ ಸಿಬ್ಬಂದಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ : ಡಾ.‌ಜಿ.ಪರಮೇಶ್ವರ್‌  – vishwanews24

Leave a Reply