ಉಡುಪಿ: ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ : ಪ್ರಮೋದ್ ಮಧ್ವರಾಜ್ – vishwanews24

Featured, ಉಡುಪಿ

ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ..

ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ :ಪ್ರಮೋದ್ ಮಧ್ವರಾಜ್

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಹರಿದಾಡುತ್ತಿರುವ ಕೆಲವು ಸುದ್ದಿಗಳು ಮತ್ತು ಊಹಾಪೋಹಗಳು ನನ್ನ ಗಮನಕ್ಕೆ ಬಂದಿವೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.

ನಾನು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ, ಜನಸೇವೆಯ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ಆದರೆ ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ.

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ – vishwanews24

ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ; ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ನನಗೆ ಅಧಿಕಾರ ಸಿಕ್ಕರೆ ಅದು ಕೇವಲ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ನನ್ನ ಪಾಲಿಗೆ ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಜವಾಬ್ದಾರಿಯಾಗಿದೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಜವಾಬ್ದಾರಿ ಸಿಗದಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ನಾಯಕರುಗಳು ನನ್ನ ಕಾರ್ಯ, ಪಕ್ಷದ ಮೇಲಿನ ನಿಷ್ಠೆ ಹಾಗೂ ಜನಸೇವೆಯ ಬದ್ಧತೆಯನ್ನು ಖಂಡಿತವಾಗಿಯೂ ಗುರುತಿಸಿ ಸೂಕ್ತ ಹಾಗೂ ಉತ್ತಮ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನ್ನ ರಾಜಕೀಯ ಪಯಣದಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡುತ್ತಿರುವ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನತೆಗೆ ನಾನು ಸದಾ ಚಿರಋಣಿಯಾಗಿದ್ದೇನೆ. ಅವರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಮತ್ತಷ್ಟು ಶಕ್ತಿಯನ್ನು ನೀಡುತ್ತಿದೆ.

ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – vishwanews24

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಮತ್ತು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ.

“ಅಧಿಕಾರ ನನ್ನ ಗುರಿಯಲ್ಲ ಜನಸೇವೆಯೇ ನನ್ನ ಧೈಯ. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ.”- ಪ್ರಮೋದ್ ಮಧ್ವರಾಜ್

Leave a Reply