ಉಡುಪಿ: ಪಾನ್ ಅಪ್ಡೇಟ್ ಹೆಸರಲ್ಲಿ ಲಿಂಕ್ ಕಳುಹಿಸಿ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು – Vishwanews24

Featured, ಉಡುಪಿ

ಉಡುಪಿ: ಪಾನ್ ಅಪ್ಡೇಟ್ ಹೆಸರಲ್ಲಿ ಲಿಂಕ್ ಕಳುಹಿಸಿ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಉಡುಪಿ: ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.

ಸುಧಾಕರ ಕಾಂಚನ್ ಇವರು ಹೆಚ್.ಡಿ.ಎಫ್.ಸಿ ಬ್ಯಾಂಕ್, ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರಿಗೆ ಪಾನ್‌ಕಾರ್ಡ್‌ ಅಪ್ಡೇಟ್ ಮಾಡಲು ಸಂದೇಶ ಕಳುಹಿಸಿದ್ದ.

ಕಾಪು : ಮಾ. 21 ಮತ್ತು 22 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಸದ್ರಿ ಸಂದೇಶದಲ್ಲಿರುವ ಲಿಂಕ್‌ನ್ನು ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ಪಿರ್ಯಾದಿದಾರರು ನಂಬಿ ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್‌ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ರೂ.1,00,000/- ಹಣ ಆನ್ ಲೈನ್ ಮುಖೇನ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದುದಾರರನ್ನು ವಂಚಿಸಿ ಮೋಸದಿಂದ ಹಣ ವರ್ಗಾವಣೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 29/2023 ಕಲಂ 66(C), 66(D), ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಬಂಟ್ವಾಳ: ಉಗ್ರರಿಗೆ ಹಣಕಾಸಿನ ನೆರವು: ದ.ಕ ಹಲವೆಡೆ NIA ದಾಳಿ – Vishwanews24

Leave a Reply