ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ ; ಕಾರ್ಯಕ್ರಮಕ್ಕೆ ಬಿಗಿ ಭದ್ರತೆ – vishwanews24

Featured, ಉಡುಪಿ

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ ; ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ಉಡುಪಿ: ಪ್ರಧಾನಿ ಮೋದಿ ಅವರು ಇದೇ ನವೆಂಬರ್​​ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.

ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಉಡುಪಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ಮಂತ್ರಿಯವರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಉಡುಪಿಗೆ ಪ್ರಧಾನಿ ಮೋದಿ ಭೇಟಿ : ನ. 28ರಂದು ವಾಹನ ಸಂಚಾರ ವ್ಯತ್ಯಯ – vishwanews24

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್​ ಗೀತೋತ್ಸವ ಅಂಗವಾಗಿ ನವೆಂಬರ್​ 28 ರಂದು ನಡೆಯಲಿರುವ ಲಕ್ಷ ಕಂಠ ಪಾರಾಯಣದಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಈ ಧಾರ್ಮಿಕ ಉತ್ಸವದಲ್ಲಿ ಒಂದು ಲಕ್ಷ ಭಕ್ತರು ಭಾಗವಹಿಸಲಿದ್ದು, ಒಂದೇ ಸಮಯದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನ ಪಠಿಸಲಿದ್ದಾರೆ.

ಪ್ರಧಾನಿ ಮೋದಿ ಅವರ ಭೇಟಿಗೆ ಭದ್ರತಾ ವ್ಯವಸ್ಥೆ ಕಟ್ಟು ನಿಟ್ಟಾಗಿದ್ದು, ಮಠದ ಆವರಣದಲ್ಲಿ ಭಕ್ತರ ಸುರಕ್ಷತೆಗಾಗಿ ವಿಶೇಷ ಪಾಸ್ ವ್ಯವಸ್ಥೆ ಜಾರಿಗೆ ಮಾಡಲಾಗಿದೆ. ಮಠ ಪ್ರವೇಶದ ಮಾರ್ಗಗಳಲ್ಲಿ ನಿಗದಿತ ನಿಯಮಗಳನ್ನು ಪಾಲಿಸಬೇಕೆಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು, ಪ್ರಧಾನಿ ಮೋದಿ ಅವರು ಭಾಗಿಯಾಗಲಿರುವ ಲಕ್ಷ ಕಂಠ ಪಠಣ ಕಾರ್ಯಕ್ರಮಕ್ಕಾಗಿ ಜರ್ಮನ್ ತಂತ್ರಜ್ಞಾನದ ಪೆಂಡಾಲ್ ಅಳವಡಿಸಲಾಗಿದೆ.

ಪುತ್ತೂರು : ಆರೋಗ್ಯ ಸಮಸ್ಯೆ ; ಮನನೊಂದಿದ್ದ ಯುವತಿ ಆತ್ಮಹತ್ಯೆ – vishwanews24

 

Leave a Reply