ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24

Featured, ಉಡುಪಿ

ಉಡುಪಿ :ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವು

ಉಡುಪಿ : ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಮಧ್ಯಾಹ್ನ ನಡೆದಿದೆ.

ಹೆಬ್ರಿ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಮೃತ ದುರ್ದೈವಿಯಾಗಿದ್ದಾರೆ.

ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ವೇಗದೂತ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಾದ್ಯಂತ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಘೋಷಣೆ – Vishwanews24

Leave a Reply