ಉಡುಪಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ – vishwanews24

Featured, ಉಡುಪಿ

ಉಡುಪಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಉಡುಪಿ : ಫೇಸ್‌ಬುಕ್‌ ಜಾಹೀರಾತು ನಂಬಿ ಹಣ ಕಳೆದುಕೊಂಡ ಯುವಕ – vishwanews24

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ ಆಶ್ರಯ ಮತ್ತು ಉದ್ಯೋಗ ನೀಡುತ್ತಿರುವುದು ಹಲವು ಮೂಲಗಳಿಂದ ಕಂಡು ಬಂದಿದ್ದು ಈ ವಿಷಯವು ಅತ್ಯಂತ ಗಂಭೀರವಾಗಿದ್ದು ಇದು ದೇಶದ ಭದ್ರತೆಗೆ ಅಪಾಯ ತರುವ ಸಾಧ್ಯತೆಗಳಿದ್ದು ಅಕ್ರಮ ನುಸುಳುಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕಲ್ಪಿಸಿ ಉದ್ಯೋಗ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು ಇಂತಹ ದುಷ್ಕೃತ್ಯವನ್ನು ಮಾಡುತ್ತಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಲಾಯಿತು.

Leave a Reply