ಉಡುಪಿ: ಭೀಕರ ರಸ್ತೆ ಅಪಘಾತ ; ಲಾರಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವು – vishwanews24

Featured, ಉಡುಪಿ

ಉಡುಪಿ: ಭೀಕರ ರಸ್ತೆ ಅಪಘಾತ ; ಲಾರಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವು

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಕೆಜಿ ರಸ್ತೆಯ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರಕು ಸಾಗಣೆ ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿಕೊಂಡ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.

ಮೃತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸವಾರನ ದೇಹವು ಛಿದ್ರವಾಗಿತ್ತು. ಅಪಘಾತದಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.

ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಹಾಲಿಂಗ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಹಜರು ನಡೆಸಿದರು. ನಂತರ ಸಮಾಜ ಸೇವಕ ನಿತ್ಯಾನಂದ ಓಲ್ಕಾಡು ಮತ್ತು ಬ್ರಹ್ಮಾವರ ಆಂಬ್ಯುಲೆನ್ಸ್ ಚಾಲಕನ ಸಹಾಯದಿಂದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮಂಗಳೂರು: ಜೋಡಿ ಕೊಲೆ ಪ್ರಕರಣ- 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ – vishwanews24

Leave a Reply