ಉಡುಪಿ : ಮಹೇಶ್ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ  – vishwanews24

Featured, ಉಡುಪಿ

ಉಡುಪಿ : ಮಹೇಶ್ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ 

ಉಡುಪಿ : ವಿವಾದಿತ ಹೇಳಿಕೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಾಥಮಿಕ ವಿಚಾರಣೆ ನಂತರ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಿಂದ ವೈದ್ಯಕೀಯ ಪರಿಶೀಲನೆಗೊಳಪಡಿಸಲಾದ ತಿಮರೋಡಿಯನ್ನು, ನಂತರ ಬ್ರಹ್ಮಾವರ ತಾಲೂಕು ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶ ಹೊರಡಿಸಿತು.

ತಿಮರೋಡಿ ಅವರು ಅರೆಸ್ಟ್ ಆಗುವ ಬಗ್ಗೆ ತಿಳಿದ ತಕ್ಷಣವೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ಗುಂಭೀರತೆಯ ಹಿನ್ನೆಲೆಯಲ್ಲಿ ಸಂಚಾರಿ ಪೀಠವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಲಾಗಿದೆ.

Leave a Reply