ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ, : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬAಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿAದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು.

ಉಡುಪಿ: ಜ.22 ರ0ದು ಸಹಕಾರ ರತ್ನ ಇಂದ್ರಾಳಿ ಜಯಕರ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭ : vishwanews24

8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಎನ್‌ಟೈಟಲ್‌ಮೆಂಟ್ ಬೇಸಿಸ್ ಮೂಲಕ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಹಾಗೂ ಪಿ.ಯು.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತು ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ  : ರಮೇಶ್ ಕಾಂಚನ್  – Vishwanews24

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Leave a Reply