ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24
ಉಡುಪಿ :ಯುವಸ್ಪಂದನ ಕಾರ್ಯಕ್ರಮ : ಜಿಲ್ಲೆಗೆ ಸಮಗ್ರ ಪ್ರಶಸ್ತಿ -Vishwanews24
ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮಾನ್ಸ್ ಬೆಂಗಳೂರು ಸಹಯೋಗದೊಂದಿಗೆ ಅನುಷ್ಠಾನಗೊಂಡಿರುವ ಯುವಸ್ಪಂದನ ಕಾರ್ಯಕ್ರಮದಡಿಯಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ತಂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಲೇಖನ – ಯುವ ಸ್ಪಂದನ ಶ್ಯಾಮಲಾ ಕಿರಣ್ ಪ್ರಥಮ, ಅತ್ಯುತ್ತಮ ಲೇಖನ ಚಟುವಟಿಕೆ ಜ್ಯೋತಿ ಪ್ರಶಾಂತ್ ಪ್ರಥಮ ಹಾಗೂ ಗುಂಪು ಚಟುವಟಿಕೆಯಲ್ಲಿ ಯುವಸ್ಪಂದನ ವಿಡಿಯೋ ಪ್ರಥಮ, ಭಿತ್ತಿಪತ್ರ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.
ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಸಿ ನಾರಾಯಣ ಗೌಡ ಪ್ರಶಸ್ತಿ ಪ್ರಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್, ಬೆಂಗಳೂರು ನಿಮಾನ್ಸ್ ನಿರ್ದೇಶಕ ಡಾ| ಗುರುರಾಜ್, ಬೆಂಗಳೂರು ನಿಮಾನ್ಸ್ ಹೆಚ್ಚುವರಿ ಪ್ರಾಧ್ಯಾಪಕ ಡಾ| ಪ್ರದೀಪ್ ಬಾನಂದೂರು ಉಪಸ್ಥಿತರಿದ್ದರು.
ಉಡುಪಿ : ಫೆಬ್ರವರಿ 17 ರಂದು ಸಾಂಸ್ಕೃತಿಕ ಸೌರಭ ಕಾರ್ಯಕ್ರಮ -Vishwanews24
ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ ರೋಷನ್ ಶೆಟ್ಟಿ ಭಾಗವಹಿಸಿ, ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
