ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ ದಾನ: ಆರು ಮಂದಿಯ ಜೀವಕ್ಕೆ ಬೆಳಕು – VIshwanews24
ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ ದಾನ: ಆರು ಮಂದಿಯ ಜೀವಕ್ಕೆ ಬೆಳಕು – Vishwanews24
ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರು ಅಂಗಾಂಗ ದಾನದಿಂದ 6 ಮಂದಿಯ ಜೀವಕ್ಕೆ ಬೆಳಕಾಗಿದ್ದಾರೆ.
ಬ್ರಹ್ಮಾವರದ ಉಪ್ಪಿನಕೋಟೆ ಬಳಿ ಎ. 2ರಂದು ಸಂಜೆ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಸಾಲಿಗ್ರಾಮದ ಶ್ರೀನಿವಾಸ (19) ಎಂಬವರು ತೀವ್ರ ಗಾಯಗೊಂಡು ಬಳಿಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಬೆಂಗಳೂರು: ‘ಗರುಡಾ ಗ್ಯಾಂಗ್’ನ ಉಡುಪಿ ಮೂಲದ ಮೂಳೂರಿನ ರೌಡಿ ಶೀಟರ್ ಗಳ ಮೇಲೆ ಪೊಲೀಸ್ ಫೈರಿಂಗ್ -vishwanews24
ಮೃತ ಯುವಕನ ಹೆತ್ತವರು ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರೂ, ಅಂಗಾಂಗ ಅಪೇಕ್ಷಿತರ ಬಾಳಿಗೆ ಬೆಳಕಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೃತ ಯುವಕನ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ದಾನ ಮಾಡಲಾಗಿದೆ. ಅಂಗಾಂಗಕ್ಕಾಗಿ ನೋಂದಾಯಿಸಿದ 6 ಮಂದಿಗೆ ಶ್ರೀನಿವಾಸ್ ಅಂಗಾಂಗಗಳನ್ನು ಅಳವಡಿಸಲಾಗಿದೆ. ಎರಡು ಕಾರ್ನಿಯಾಗಳು ಮತ್ತು ಎರಡು ಮೂತ್ರಪಿಂಡ ಹಾಗೂ ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ನೋವಿನಲ್ಲೂ ಸಾಮಾಜಿಕ ಕಳಕಳಿ ಮೆರೆದ ಬಡ ಕುಟುಂಬದ ನಿರ್ಧಾರಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
