ಉಡುಪಿ : ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣ ಬಜೆಟ್ : ಕುಯಿಲಾಡಿ -Vishwanews24

Featured, ಉಡುಪಿ

ಉಡುಪಿ : ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣ ಬಜೆಟ್ : ಕುಯಿಲಾಡಿ -Vishwanews24

ಉಡುಪಿ : ಆರ್ಥಿಕವಾಗಿ ಮತ್ತು ಸಮಾಜಿಕವಾಗಿ ಹಿಂದುಳಿದವರ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕಾಗಿ ಮಾಡಿದ ಬಜೆಟ್ ಇದಾಗಿದ್ದು ಮುಂದಿನ ದಿನಗಳಲ್ಲಿ ಉತ್ತಮ ಪರಿಣಾಮ ಬೀರುವ ಬಜೆಟ್ ಆಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆ ಮಾಡಲಾಗಿದೆ. ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯೋಜನೆ, ನೀಟ್ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್, ವೈದ್ಯಕೀಯ ವಿಧ್ಯಾರ್ಥಿಗಳಿಗೆ ಹೆಚ್ಚಿನ ಸಾಲ, ಕರ್ನಾಟಕ ಕಲಾ ಗ್ರಾಮ ಯೋಜನೆ, ನಮ್ಮ ಕ್ಲಿನಿಕ್ ಯೋಜನೆ, ಉಡುಪಿ ಮತ್ತು ದ. ಕ. ಜಿಲ್ಲೆಗೆ ತಲಾ ಒಂದು ಶ್ರೀ ನಾರಾಯಣಗುರು ವಸತಿ ಶಾಲೆ ಆರಂಭ, ಕಾರ್ಮಿಕ ಕ್ಷೇಮಾಭಿವೃದ್ಧಿ ಯೋಜನೆ, ನೀರಾವರಿಗೆ ಆದ್ಯತೆ, ಕುರಿ ಮತ್ತು ಮೇಕೆಗಳಿಗೆ ಪರಿಹಾರಧನ ನೀಡುವ ಅನುಗ್ರಹ ಯೋಜನೆ, ಗೋ ಸಂತತಿಯ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪುಣ್ಯಕೋಟಿ ದತ್ತು ಯೋಜನೆ ಮೊದಲಾದವು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಾಡಲಾದ ಸರ್ವವ್ಯಾಪಿ ಸರ್ವ ಸ್ವರ್ಶಿ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

Leave a Reply