ಉಡುಪಿ : ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ – vishwanews24

Featured, ಉಡುಪಿ

ಉಡುಪಿ : ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ

ಉಡುಪಿಯಲ್ಲಿ ನೇರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು.

ವಿಶ್ವ ಗೀತಾ ಪರ್ಯಾಯದ ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಮತ್ತು ಶ್ರೀಮತಿ ಲಕ್ಷ್ಮೀ ರಂಜನ್, ಶ್ರೀ ಪುತ್ತಿಗೆ ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯ ಚಟುವಟಿಕೆಗಳ ಸಂಯೋಜಕ ಡಾ. ಎ. ಕೇಶವರಾಜ್ ಮತ್ತು ಪರ್ಯಾಯ ಮಹೋತ್ಸವದ ಕಾರ್ಯಕರ್ತ, ಎ. ಮುರಳೀಧರ್ ಅವರು ಜಪಾನಿನ ಗಣ್ಯ ಅತಿಥಿಗಳನ್ನು ಹಾರಾರ್ಪಣೆಯ ಮೂಲಕ ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ  – vishwanews24

Leave a Reply