ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ – vishwanews24
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್
ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ.
ಸಾವಿರಾರು ಜನ ಓಡಾಡುವ ಕೃಷ್ಣ ಮಠದ ಒಳಾಂಗಣದಲ್ಲಿ, ಇತ್ತೀಚಿಗೆ ಕೆಲವು ಪಿಕ್ ಪಾಕೆಟ್ ಪ್ರಕರಣಗಳು ನಡೆದಿದೆ. ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿಕೊಂಡಿರುವ ದುಷ್ಕರ್ಮಿಗಳು, ಅರಿವಿಗೆ ಬಾರದಂತೆ ಪರ್ಸುಗಳನ್ನು ಎಗರಿಸುತ್ತಿದ್ದಾರೆ.
ಇತ್ತೀಚಿಗೆ ಮಹಿಳೆಯೊಬ್ಬರ ಪರ್ಸ್ ಎಗರಿಸಿದ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದ್ದು, ಕೆಲ ಪ್ರವಾಸಿಗರ ಅರಿವಿಗೆ ಬಾರದಂತೆ ಕಳ್ಳತನ ನಡೆಯುತ್ತಿದೆ. ಪ್ರವಾಸಿಗರು ಎಚ್ಚರಿಕೆಯಿಂದ ಇರುವುದು ಅಗತ್ಯವಾಗಿದೆ.
