ಉಡುಪಿ: ಸುಂಕ ವಸೂಲಿ ಕೇಂದ್ರದಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸ್ಥಳೀಯರಿಗೆ ವಿನಾಯಿತಿ ನೀಡಿ: ರಘುಪತಿ ಭಟ್ -Vishwanews24

Featured, ಉಡುಪಿ

ಉಡುಪಿ: ಸುಂಕ ವಸೂಲಿ ಕೇಂದ್ರದಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸ್ಥಳೀಯರಿಗೆ ವಿನಾಯಿತಿ ನೀಡಿ: ರಘುಪತಿ ಭಟ್ -Vishwanews24

ಉಡುಪಿ: ಉಡುಪಿ ಜಿಪಂ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಸಭೆ ನಡೆಯಿತು.ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿ ಮಾತನಾಡಿ, ಸುಂಕ ವಸೂಲಿ ಕೇಂದ್ರಗಳಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕು. ಅಲ್ಲದೆ, ಸುಂಕ ವಸೂಲಿ ಕೇಂದ್ರದಲ್ಲಿ ಸ್ಥಳೀಯರನ್ನೇ ಸುಂಕ ವಸೂಲಿದಾರರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದರು.

ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ., ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಗೃತಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

/ಉಡುಪಿ : ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿ ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು : ಸಿದ್ದರಾಮಯ್ಯ ವಾಗ್ದಾಳಿ -Vishwanews24