ಉಡುಪಿ ಸ್ವರ್ಣಾ ನದಿ ಮರಳು ಲೂಟಿ: ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿಕೆ.vishwanews24
ಉಡುಪಿ ಸ್ವರ್ಣಾ ನದಿ ಮರಳು ಲೂಟಿ: ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಉಡುಪಿ ಜಿಲ್ಲಾಧಿಕಾರಿ ಜಿ
ಜಗದೀಶ್ ಹೇಳಿಕೆ.
ಉಡುಪಿ : ಸ್ವರ್ಣಾ ನದಿಯ ಮರಳು ಲೂಟಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ಹಿನ್ನೆಲೆಯಲ್ಲಿ ಉಡುಪಿ ಡಿ.ಸಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಕೆಲಸಗಳು ಸಾಕಷ್ಟಿದ್ದವು.ಹೀಗಾಗಿ ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗುವುದಿಲ್ಲ.ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.
ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಯುವ ಕಾಂಗ್ರೆಸ್ ಆರೋಪ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ
ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ.ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ.ಐದು ವಾಹನ ಸೀಝ್ ಮಾಡಿ ,ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ.ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ನಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ.ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.

