ಉಡುಪಿ: ಹಿಜಾಬ್ ವಿವಾದ :ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ – Vishwanews24

Featured, ಉಡುಪಿ

ಉಡುಪಿ: ಹಿಜಾಬ್ ವಿವಾದ :ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ – Vishwanews24

ಉಡುಪಿ : ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೆಲ ಬಾಲಕಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ನಡುವೆ ವಾಗ್ವಾದ ನಡೆದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿ ನಾಲ್ಕು ವಾರಗಳಲ್ಲಿ ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ಉಪವಿಭಾಗಾಧಿಕಾರಿ ಕೆ ರಾಜು ನೇತೃತ್ವದಲ್ಲಿ ಹಾಗೂ ಉಡುಪಿ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದ ಸಮಿತಿಯ ಸದಸ್ಯರು ಫೆ.2ರಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗದಿಂದ ಜಿಲ್ಲಾಡಳಿತಕ್ಕೆ ನೋಟಿಸ್‌ ಬಂದಿದೆ. ಹಾಗಾಗಿ ಹೊಸ ಸಮಿತಿಯನ್ನು ನೇಮಿಸಲಾಗಿದ್ದು, ವರದಿ ಬಂದ ತಕ್ಷಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ :

ಕುಂದಾಪುರ : ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24

 

Leave a Reply